29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!