22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!