24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!