September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ಹೆಮ್ಮೆಯ ಪೂರ್ವ ವಲಯ ಉಪಾಧ್ಯಕ್ಷರು, ಹಾಗೂ ಮಡಂತ್ಯಾರು ಡ್ರೀಮ್ಸ್ ಡೆಕೋರೇಟರ್ಸ್ ಹಾಗೂ ಮೈಸ್ ಕಂಪ್ಯೂಟರಿನ ಮಾಲಕರಾದ ಜೇಸಿ ಜಯೇಶ್ ಬರೆಟ್ಟೊ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಮಡಂತ್ಯಾರು ಮೂಲಕ ಜೇಸಿ ಆಂದೋಲನಕ್ಕೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2016 ರಲ್ಲಿ ಜೆಸಿಐ ಮಡಂತ್ಯಾರಿನ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ 24 ವರ್ಷಗಳ ಸುಧೀರ್ಘ ಅನುಭವ ಹೊಂದಿದ ಇವರು ಸಾಧನಾ ಶ್ರೀ ಪ್ರಶಸ್ತಿ ಪಡೆಯುವಲ್ಲಿ ಅರ್ಹ ವ್ಯಕ್ತಿಯೇ ಸರಿ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
error: Content is protected !!