23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ, ಸುದ್ಧಿ ಉದಯ ವಾರ ಪತ್ರಿಕೆಯ ಉಪಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2017 ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ವೃತ್ತಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪ್ರತಿಮ ಸೇವೆಯನ್ನು ಗುರುತಿಸಿ, ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ‘ವೈಭವ’ ಸಾಧಕ ಜೇಸಿಗಳ ಸಮಾಗಮದಲ್ಲಿ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿದೆ.

Related posts

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!