July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ, ಸುದ್ಧಿ ಉದಯ ವಾರ ಪತ್ರಿಕೆಯ ಉಪಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2017 ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ವೃತ್ತಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪ್ರತಿಮ ಸೇವೆಯನ್ನು ಗುರುತಿಸಿ, ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ‘ವೈಭವ’ ಸಾಧಕ ಜೇಸಿಗಳ ಸಮಾಗಮದಲ್ಲಿ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿದೆ.

Related posts

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
error: Content is protected !!