22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!