25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾದ ಚಂದ್ರಹಾಸ ಬಳಂಜ ಭಾಗವಹಿಸಿ ಉತ್ತೀರ್ಣರಾಗಿ ತಾತ್ಕಾಲಿಕ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಗೋವಾ, ಆಂಧ್ರಪ್ರದೇಶ, ಕೇರಳ ಹೀಗೆ ವಿವಿಧ ಕಡೆಯಿಂದ ಜೇಸಿಐ ಸದಸ್ಯರು ಇದರಲ್ಲಿ ಭಾಗವಹಿಸಿದ್ದು ಇದು ಜೇಸಿಐ ನ ಅತ್ಯುತ್ತಮ ತರಬೇತಿ ಕಾರ್ಯಗಾರದಲ್ಲಿ ಒಂದಾಗಿದೆ.


ಜೇಸಿಐನ ಸಕ್ರೀಯ ಸದಸ್ಯರಾಗಿರುವ ಇವರು ಇದರೊಂದಿಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕ್ಕೊಂಡಿದ್ದಾರೆ.

ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ ದಂಪತಿಗಳ ಪುತ್ರರಾಗಿರುವ ಇವರು ಬಹುಮುಖ ಪ್ರತಿಭೆಯಾಗಿದ್ದು ನಿರೂಪಣೆ, ಭಾಷಣ, ಬರವಣಿಗೆ, ನಟ, ನೃತ್ಯಪಟು, ಕುಣಿತ ಭಜನೆ, ತೀರ್ಪುಗಾರಿಕೆ ಕಾರ್ಯಕ್ರಮ ಸಂಯೋಜನೆ ಎಲ್ಲಾ ವಿಭಾಗದಲ್ಲಿ ಕೂಡ ಸೈ ಎನಿಸಿಕ್ಕೊಂಡಿದ್ದು ಹೀಗಾಗಲೆ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ ಹಲವಾರು ತರಬೇತಿ ನಡೆಸಿದ ಅನುಭವವನ್ನು ಪಡೆದಿದ್ದಾರೆ.

Related posts

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya
error: Content is protected !!