ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Leave a Comment

error: Content is protected !!