27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya
error: Content is protected !!