23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya
error: Content is protected !!