ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!