ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಅಗತ್ಯ ಪರಿಹಾರಗಳನ್ನು ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಅಧ್ಯಕ್ಷ ತ್ರಿವಿಕ್ರಮ್ ಹೆಬ್ಬಾರ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ತಹಸೀಲ್ದಾರರಿಗೆ ಜು.29ರಂದು ಸೋಮವಾರ ಮನವಿ ಸಲ್ಲಿಸಲಾಯಿತು.


ಜು.25 ರಂದು ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಅವರು ಮುಂಡಾಜೆಯ ತನ್ನ ಮನೆಗೆ ಹೋಗುತ್ತಿರುವ ಸಂದರ್ಭ ಹಿಂದಿನಿಂದ ಬಂದು ಬೊಲೇರೋ ವಾಹನ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅವರ ಪುತ್ರಿ ಉಜಿರೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯಾ(10ವ) ಮೇಲೆ ಬೊಲೆರೋ ವಾಹನ ಚಲಿಸಿದ ಪರಿಣಾಮ ಬಾಲಕಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸುವಾಗ ಮೃಟಪಟ್ಟಿದ್ದರು. ಬಾಲಕಿಯ ತಂದೆ ಗುರುಪ್ರಸಾದ್ ಅವರಿಗೂ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!