24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!