22.7 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!