30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
error: Content is protected !!