September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!