24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya
error: Content is protected !!