23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

ಬೆಳ್ತಂಗಡಿ: ಯೆನೆಪೋಯ ಮೆಡಿಕಲ್ ಕಾಲೇಜು, ದೇರಳಕಟ್ಟೆ,ಮಂಗಳೂರು ಇದರ ರಜತ ಮಹೋತ್ಸವದ ಸಂದರ್ಭದಲ್ಲಿ ಯೋಗ ಗುರು ಕುಶಾಲಪ್ಪ ಗೌಡ ಅವರಿಂದ ನಿರಂತರ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆಯ ಸಂದರ್ಭ ಉಚಿತ ಯೋಗ ತರಭೇತಿ ಪಡೆದ ಆಸಕ್ತ ಶಿಬಿರಾರ್ಥಿಗಳಿಂದ ಹಾಗೂ ದಾನಿಗಳಿಂದ ಸಂಗ್ರಹವಾದ ಒಟ್ಟು ರೂ.2,52,525 ( ಎರಡು ಲಕ್ಷದ ಐವತ್ತೆರಡು ಸಾವಿರದ ಐನೂರ ಇಪ್ಪತ್ತೈದು) ರೂಪಾಯಿಯನ್ನು ಬೆಳ್ಳಿಹಬ್ಬದ ಈ ಶುಭಸಂದರ್ಭದಲ್ಲಿ ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ| ಯೆನೆಪೋಯ ಅಬ್ದುಲ್ ಕುಂಞಿ ಇವರು ಯೋಗ ಗುರು ಹಾಗೂ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ), ಮೊಗ್ರು, ಬೆಳ್ತಂಗಡಿ ಇದರ ಸ್ಥಾಪಕ ಅಧ್ಯಕ್ಷ ಕುಶಾಲಪ್ಪ ಗೌಡ ನೆಕ್ಕರಾಜೆ ಇವರಿಗೆ ಗಣ್ಯರ ಉಪಸ್ಥಿತಿಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿ ಸೇವಾ ಟ್ರಸ್ಟ್ (ರಿ) ಮೊಗ್ರು,ಬೆಳ್ತಂಗಡಿ ಇದರ ಕಾರ್ಯದರ್ಶಿ ಮನೋಹರ ಗೌಡ ಅಂತರ, ಉಪಾಧ್ಯಕ್ಷ ಆನಂದ ಬಿ, ಟ್ರಸ್ಟಿ ಬಾಲಕೃಷ್ಣ ಮುಗೇರಡ್ಕ, ಸದಸ್ಯ ಗಂಗಾಧರ ಪೂಜಾರಿ, ಯೋಗ ಶಿಕ್ಷಕ ಗಿರಿಯಪ್ಪ ಎರ್ಮಳ,ಮಾಸ್ಟರ್ ಮೋನಿಶ್.ಯು .ಕೆ. ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಂತಹ ವಿಶ್ವ ದಾಖಲೆ ಮಾಡಿದ ಯೋಗ ಗುರುಗಳಾದ ಕುಶಾಲಪ್ಪ ಗೌಡರು ಈ ಸಾಧನೆಯಿಂದ ತನ್ನ ಸ್ವಂತಕ್ಕೆ ಯಾವುದೇ ಆರ್ಥಿಕ ಪ್ರತಿಫಲಾಪೇಕ್ಷೆ ಪಡೆಯದೇ ಸಂಗ್ರಹವಾದ ಎಲ್ಲಾ ಮೊತ್ತವನ್ನು ಗ್ರಾಮೀಣ ಮಕ್ಕಳ ಗುಣಮಟ್ಟದ ಶಿಕ್ಷಣದ ಹಿತದೃಷ್ಟಿ ಯಿಂದ ತನ್ನೂರಿನ ಶಾಲಾಭಿವೃದ್ಧಿ ಸಮಿತಿಗೆ ವಿನಿಯೋಗಿಸಿದಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು ಹಾಗೂ ಮುಂದಿನ ದಿನಗಳಲ್ಲಿ ಟ್ರಸ್ಟ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ , ಮೊಗ್ರು,ಬೆಳ್ತಂಗಡಿ ಇದರ ಅಭಿವೃದ್ಧಿಗೆ ಕಾರ್ಯಪ್ರವೃತ್ತವಾಗಲಿದೆ ಎಂದರು.

Related posts

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya
error: Content is protected !!