April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾಲ್ಕೂರು:ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಆ. 25 ರಂದು ನಡೆಯಲಿರುವ 2 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡೆ ತಡೆಗಳು ಬಾರದೆ ಸುಸೂತ್ರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಹೆಚ್.ಎಸ್,ದಿನೇಶ್ ಅಂತರ,ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರು, ಬ್ಯಾಂಕ್ ಉದ್ಯೋಗಿ ಜಗದೀಶ್ ಬಳ್ಳಿದಡ್ಡ,ಯುವಶಕ್ತಿ ತಂಡದ ಪದಾಧಿಕಾರಿಗಳಾದ ಸಂತೋಷ್ ಪಿ ಕೋಟ್ಯಾನ್,ಯೋಗೀಶ್ ಆರ್ ಯೈಕುರಿ,ಯತೀಶ್ ವೈ.ಎಲ್,ಕರುಣಾಕರ ಹೆಗ್ಡೆ ಬೊಕ್ಕಸ,ರಂಜಿತ್ ಪೂಜಾರಿ, ಪ್ರವೀಣ್ ಡಿ ಕೋಟ್ಯಾನ್, ಶರತ್ ಅಂಚನ್ ಉಪಸ್ಥಿತರಿದ್ದರು.

ಸಂಪತ್ ಕೋಟ್ಯಾನ್, ಚಂದ್ರಹಾಸ್ ಬಳಂಜ,ಮಹೇಶ್ ಕುಲಾಲ್, ಸುದೀರ್ ಮಜಲೋಡಿ, ಜಯಪ್ರಸಾದ್ ದರ್ಖಾಸ್ ,ಪ್ರಶಾಂತ್ ಕೋಟ್ಯಾನ್, ಜಗದೀಶ್ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ರಕ್ಷಿತ್ ಬಗ್ಯೋಟ್ಟು, ಪ್ರಶಾಂತ್ ಮಜಲೋಡಿ, ಸುಧೀಶ್ ಪೂಜಾರಿ,
ಸಂತೋಷ್ ಕುಮಾರ್, ವಿಜಯ ಪೂಜಾರಿ, ಪ್ರಣಾಮ್ ಶೆಟ್ಟಿ, ಕಿರಣ್ ಕುಮಾರ್, ಸಾಯಿ, ಪ್ರಥಮ್ ಸಹಕರಿಸಿದರು.

ಆಗಷ್ಟ್ 25 ರಂದು ಬೆಳಿಗ್ಗೆಯಿಂದ ವಿವಿಧ ಆಟೋಟ ಸ್ಪರ್ದೆಗಳು, 1-6 ವಯಸ್ಸಿನ ಮಕ್ಕಳಿಗೆ ಬಾಲಕೃಷ್ಣ, ಮುದ್ದುಕೃಷ್ಣ ಸ್ಪರ್ದೆ,ವಾಲಿಬಾಲ್, ತ್ರೋಬಾಲ್,ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.

Related posts

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!