23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿ

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.
ಅಂದು ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ ವಿಶೇಷ ಪ್ರಾರ್ಥನೆ ನೆರವೇರಿತು. 25 ನೆಯ ವಿಜಯೋತ್ಸವದ ಸಂಭ್ರಮ ಸೂಚಕವಾಗಿ ಧಾರ್ಮಿಕ ಕೇಂದ್ರದಿಂದ ಭಾರತ ದೇಶದ ಸೈನಿಕ ಸೇವೆಯಿಂದ ನಿವೃತ್ತರಾದ ಥೋಮಸ್ ಪುತಿಯುಕುಲಂಗರ, ಮ್ಯಾಥ್ಯೂ ಉರಿಯಲ್ಪಡಿಕ್ಕಲ್ , ವಿನೋಯ್ ಚೆಮ್ಮಟ್ಟಕುಯಿ ಇವರುಗಳಿಗೆ ಗೌರವ ಸನ್ಮಾನವನ್ನು ನೀಡಲಾಯಿತು.
ಹಾಗೂ ಪ್ರಸ್ತುತ ಸೇವೆಯಲ್ಲಿ ನಿರತರಾಗಿರುವ ಥೋಮಸ್ ಪೀಡಿಗೆಯಿಲ್, ಜೋಮೊನ್ ಪುವತಿಂಗಲ್ ಇವರನ್ನು ಗೌರವಿಸುವ ಸಲುವಾಗಿ ಇವರ ತಂದೆಯವರಾದ ಫಿಲಿಪ್ ಪಿಡಿಗೇಲ್, ಬೇಬಿಚ್ಚನ್ ಪೂವತಿಂಗಲ್ ಇವರನ್ನು ಸನ್ಮಾನಿಸಲಾಯಿತು. ಧರ್ಮ ಕೇಂದ್ರದ ಧರ್ಮ ಗುರುಗಳಾದ ವಂದನೀಯ ಫಾದರ್ ಜೋಸೆಫ್ ವಾಳೂಕಾರನ್, ಧರ್ಮ ಕೇಂದ್ರದ ಟ್ರಸ್ಟಿಗಳಾದ ಜೋಳಿ ತಟ್ಟಾಂಪರಂಬಿಲ್, ಸೆಬಾಸ್ಟಿಯನ್ ವಳರ್ಕೊಟ್, ಜೋಸೆಫ್ ಪೀಡಿಗಯಿಲ್, ಸಂತೋಷ್ ಪೂವತಿಂಗಲ್ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಬ್ರದರ್ ಅರುಣ್ ಅಯ್ಯನಿಕಟ್ಟ್ ಅವರು, ಕಾರ್ಗಿಲ್ ಯುದ್ಧದ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ವಿನೋಯ್ ಚೆಮ್ಮಟ್ಟಕುಯಿ ಕಾರ್ಗಿಲ್ ಅನುಭವವನ್ನು ವಿವರಿಸಿದರು.
ಧರ್ಮ ಕೇಂದ್ರದ ನಾಲ್ಕು ತಲೆಮಾರುಗಳ ತಂದೆ ತಾಯಿಯವರಾಗಿರುವ ಗ್ರೇಟ್ ಗ್ರಾಂಡ್ ಪ್ಯಾರೆಂಟ್ಸ್ ವಲಿಯಪರಂಬಿಲ್ ಥೋಮಸ್ ತ್ರೇಸಿಯಮ್ಮ ಮತ್ತು ಚಮ್ಮಟ್ಟಕುಯಿ ವರ್ಗೀಸ್ ಕ್ಲಾರ ಅವರನ್ನು ಗ್ರಾಂಡ್ ಪ್ಯಾರೆಂಟ್ಸ್ ದಿನದಂದು ಹೋಗುಚ್ಚ ನೀಡಿ ಅಭಿನಂದಿಸಲಾಯಿತು.
ಸಂತ ಅಲ್ಫೋನ್ಸಾರವರ ಸ್ಮರಣೆಯ ಭಾಗವಾಗಿ ಅಲ್ಫೋನ್ಸಾ ಹೆಸರನ್ನು ಹೊಂದಿರುವ ನಾಮದಾರಿಗಳಿಗೆ ಧರ್ಮ ಕೇಂದ್ರದ ವತಿಯಿಂದ ಹೋಗುಚ್ಚ ನೀಡಿ ಶುಭಾಶಯಗಳನ್ನು ಕೋರಲಾಯಿತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
error: Content is protected !!