25.4 C
ಪುತ್ತೂರು, ಬೆಳ್ತಂಗಡಿ
May 18, 2025
ಚಿತ್ರ ವರದಿ

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.
ಅಂದು ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ ವಿಶೇಷ ಪ್ರಾರ್ಥನೆ ನೆರವೇರಿತು. 25 ನೆಯ ವಿಜಯೋತ್ಸವದ ಸಂಭ್ರಮ ಸೂಚಕವಾಗಿ ಧಾರ್ಮಿಕ ಕೇಂದ್ರದಿಂದ ಭಾರತ ದೇಶದ ಸೈನಿಕ ಸೇವೆಯಿಂದ ನಿವೃತ್ತರಾದ ಥೋಮಸ್ ಪುತಿಯುಕುಲಂಗರ, ಮ್ಯಾಥ್ಯೂ ಉರಿಯಲ್ಪಡಿಕ್ಕಲ್ , ವಿನೋಯ್ ಚೆಮ್ಮಟ್ಟಕುಯಿ ಇವರುಗಳಿಗೆ ಗೌರವ ಸನ್ಮಾನವನ್ನು ನೀಡಲಾಯಿತು.
ಹಾಗೂ ಪ್ರಸ್ತುತ ಸೇವೆಯಲ್ಲಿ ನಿರತರಾಗಿರುವ ಥೋಮಸ್ ಪೀಡಿಗೆಯಿಲ್, ಜೋಮೊನ್ ಪುವತಿಂಗಲ್ ಇವರನ್ನು ಗೌರವಿಸುವ ಸಲುವಾಗಿ ಇವರ ತಂದೆಯವರಾದ ಫಿಲಿಪ್ ಪಿಡಿಗೇಲ್, ಬೇಬಿಚ್ಚನ್ ಪೂವತಿಂಗಲ್ ಇವರನ್ನು ಸನ್ಮಾನಿಸಲಾಯಿತು. ಧರ್ಮ ಕೇಂದ್ರದ ಧರ್ಮ ಗುರುಗಳಾದ ವಂದನೀಯ ಫಾದರ್ ಜೋಸೆಫ್ ವಾಳೂಕಾರನ್, ಧರ್ಮ ಕೇಂದ್ರದ ಟ್ರಸ್ಟಿಗಳಾದ ಜೋಳಿ ತಟ್ಟಾಂಪರಂಬಿಲ್, ಸೆಬಾಸ್ಟಿಯನ್ ವಳರ್ಕೊಟ್, ಜೋಸೆಫ್ ಪೀಡಿಗಯಿಲ್, ಸಂತೋಷ್ ಪೂವತಿಂಗಲ್ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಬ್ರದರ್ ಅರುಣ್ ಅಯ್ಯನಿಕಟ್ಟ್ ಅವರು, ಕಾರ್ಗಿಲ್ ಯುದ್ಧದ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ವಿನೋಯ್ ಚೆಮ್ಮಟ್ಟಕುಯಿ ಕಾರ್ಗಿಲ್ ಅನುಭವವನ್ನು ವಿವರಿಸಿದರು.
ಧರ್ಮ ಕೇಂದ್ರದ ನಾಲ್ಕು ತಲೆಮಾರುಗಳ ತಂದೆ ತಾಯಿಯವರಾಗಿರುವ ಗ್ರೇಟ್ ಗ್ರಾಂಡ್ ಪ್ಯಾರೆಂಟ್ಸ್ ವಲಿಯಪರಂಬಿಲ್ ಥೋಮಸ್ ತ್ರೇಸಿಯಮ್ಮ ಮತ್ತು ಚಮ್ಮಟ್ಟಕುಯಿ ವರ್ಗೀಸ್ ಕ್ಲಾರ ಅವರನ್ನು ಗ್ರಾಂಡ್ ಪ್ಯಾರೆಂಟ್ಸ್ ದಿನದಂದು ಹೋಗುಚ್ಚ ನೀಡಿ ಅಭಿನಂದಿಸಲಾಯಿತು.
ಸಂತ ಅಲ್ಫೋನ್ಸಾರವರ ಸ್ಮರಣೆಯ ಭಾಗವಾಗಿ ಅಲ್ಫೋನ್ಸಾ ಹೆಸರನ್ನು ಹೊಂದಿರುವ ನಾಮದಾರಿಗಳಿಗೆ ಧರ್ಮ ಕೇಂದ್ರದ ವತಿಯಿಂದ ಹೋಗುಚ್ಚ ನೀಡಿ ಶುಭಾಶಯಗಳನ್ನು ಕೋರಲಾಯಿತು.

Related posts

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!