ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Leave a Comment

error: Content is protected !!