July 23, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya
error: Content is protected !!