22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

ಬೆಳ್ತಂಗಡಿ : ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದಿಸಿ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ ಜು. 27 ರಂದು ನಡೆಯಿತು.

ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ನಡ ಸ.ಹಿ. ಪ್ರಾಥಮಿಕ ಶಾಲೆಯ ಮಾಡಿನ ಸುಮಾರು 150 ಕ್ಕೂ ಅಧಿಕ ಹಂಚುಗಳು ಗಾಳಿಗೆ ಹಾರಿ ಹೋಗಿದ್ದು ಜು.27 ರಂದು ಶಾಲಾ ಮುಖ್ಯ ಶಿಕ್ಷಕರು ಶಾಲೆಗೆ ಬಂದಾಗ ಕೊಠಡಿಯೊಳಗೆ ನೀರು ತುಂಬಿ ಹರಿಯುತ್ತಿದ್ದನ್ನು ಗಮನಿಸಿ . ತಕ್ಷಣ ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಎಸ್.ಡಿ.ಎಮ್.ಸಿ ಅಧ್ಯಕ್ಷ ವಸಂತ್ ರವರಿಗೆ ದೂರವಾಣಿ ಕರೆ ಮೂಲಕ ವಿಷಯ ತಿಳಿಸಿದರು.

ಈ ವಿಷಯವನ್ನು ಗಮನಿಸಿದ ವಸಂತ ರವರು ತಕ್ಷಣ ಶಾಲೆಗೆ ಭೇಟಿ ನೀಡಿ ಶಾಲಾ ಮುಖ್ಯ ಶಿಕ್ಷಕರು ಸೇರಿ ಕೂಡಲೇ ಕನ್ಯಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಿಳಿಸಿ ಪಂಚಾಯತ್ ಅಧಿಕಾರಿಗಳು ತಕ್ಷಣ ಶಾಲೆಗೆ 150 ರಷ್ಟು ಹಂಚನ್ನು ಶಾಲೆಗೆ ಒದಗಿಸಿ ಶಾಲೆಗೆ ಭೇಟಿ ನೀಡಿದರು.

ನಂತರ ಸ್ವಯಂ ಸೇವಕರಾದ ವಸಂತ್ ರವರು ಘಟಕದ ಸಂಯೋಜಕರಾದ ವಸಂತಿಯವರ ಗಮನಕ್ಕೆ ತಿಳಿಸಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಒಲ್ವಿನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ಅರ್ವಿನ್ ಮಿರಾಂದ, ಘಟಕ ಪ್ರತಿನಿಧಿ ಮಂಜುನಾಥ್ ರವರನ್ನು ಒಗ್ಗೂಡಿಸಿಕೊಂಡು ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯಾಚರಣೆ ನಡೆಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಾದ ಕಿರಣ್ ರವರು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ, ಸಹ ಶಿಕ್ಷಕರು ಉಪಸ್ಥಿತರಿದ್ದು ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ಸೂಚಿಸಿ ಅಭಿನಂದಿಸಿದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!