July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಮಾಡುವ ಸ್ವ ಉದ್ಯೋಗದಿಂದ ಇತರಿಗೆ ಉದ್ಯೋಗ ನೀಡುವುದರ ಮೂಲಕ ನಿಮ್ಮ ಉದ್ಯಮಕ್ಕೆ ನೀವೇ ಬಾಸ್ ಆಗುತ್ತೀರಿ. ಸರಕಾರ ಮತ್ತು ಬ್ಯಾಂಕಿನಿಂದ ಆರ್ಥಿಕ ನೆರವು ಪಡೆದುಕೊಂಡ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು ತುಂಬಾ ಅವಕಾಶ ಇದೆ. ಕೃಷಿ ಚಟುವಟಿಕೆಗೆ ಬ್ಯಾಂಕ್ ಇವತ್ತು ಕಡಿಮೆ ಬಡ್ಡಿ ದರದಲ್ಲಿ ಬೇಕಾದಷ್ಟು ಸಾಲ ನೀಡುತ್ತದೆ ಅದರ ಸದುಪಯೋಗ ಮಾಡಿಕೊಂಡು ನೀವು ಕೃಷಿ ಉದ್ಯಮಿಯಾಗಿ ಜೊತೆಗೆ ಇತರರನ್ನು ಸಹ ಬ್ಯಾಂಕಿನ ನೆರವು ಪಡೆದುಕೊಳ್ಳುವಂತೆ ಪ್ರೇರಣೆ ನೀಡಿ ಎಂದು ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಛೇರಿಯ ಮಾಹಾ ಪ್ರಬಂಧಕರಾದ ಸುಧಾಕರ ಕೊಟ್ಟಾರಿ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡದೆ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆ ಹಾಗೂ ಕೆನರಾ ಏಂಜಲ್ ಖಾತೆಯ ಪುಸ್ತಕ, ವಿತ್ತರಿಸಿ ಮಾತನಾಡಿದರು. ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿ ಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮ ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಓಖಐಒ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕೃಷಿ ಸಖಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದ್ದಾರೆ.

ಕಾರ್ಯಕ್ರಮ ದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಉಪಸ್ಥಿತರಿದ್ದರು. ಭಾಗವಹಿಸಿದ್ದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya
error: Content is protected !!