ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Leave a Comment

error: Content is protected !!