22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್ ಇದರ ಪಾರ್ಟ್ನರ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನಾ ಶೆಟ್ಟಿ, “ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ನಾವು ಅದರ ಜೊತೆ ಸಾಗಬೇಕು ಹೊರತು ಹಿಂದುಳಿಯಬಾರದು” ಎಂದರು.

“ತಂತ್ರಜ್ಞಾನ ಕ್ಷೇತ್ರ ಜನರಿಗೆ ಸದಾ ಪೂರಕವಾಗಿ ಇರಬೇಕು. ಸಮಾಜಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದರ ಕಡೆಗೆ ನಮ್ಮ ಗಮನ ಇರಲಿ” ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ಆಧುನಿಕತೆಯ ಯುಗದಲ್ಲಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ವಿದ್ಯಾರ್ಥಿ ಹಂತದಲ್ಲಿ ಉತ್ತಮ ಹಾಗೂ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಕಾಲೇಜಿನಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಅವಕಾಶದಂತೆ ಸ್ವೀಕರಿಸಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಐ.ಟಿ. ಕ್ಲಬ್ ಸಂಯೋಜಕರಿಗೆ ಬ್ಯಾಡ್ಜ್ ನೀಡಿ ಅಭಿನಂದಿಸಲಾಯಿತು. ದ್ವಿತೀಯ ಬಿಸಿಎ ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ವಿಭಾಗದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

ವಿಭಾಗ ಮುಖ್ಯಸ್ಥ ಶೈಲೇಶ್ ಕುಮಾರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮೋನಲ್ ಸ್ವಾಗತಿಸಿದರು. ಆಶಾ ಹಾಗೂ ತಂಡ ಪ್ರಾರ್ಥಿಸಿದರು. ಐ. ಟಿ. ಕ್ಲಬ್ ಕಾರ್ಯದರ್ಶಿ ಅಂಶಿತಾ ವಂದಿಸಿದರು. ತ್ರಿಶಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya
error: Content is protected !!