September 6, 2026
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಬಾಬು ದೇವಾಡಿಗ, ಕಾರ್ಯದರ್ಶಿಯಾಗಿ ಕೃಷ್ಣಪ್ಪ ದೇವಾಡಿಗ, ಕೋಶಾಧಿಕಾರಿಯಾಗಿ ಪ್ರದೀಪ್ ದೇವಾಡಿಗ, ಉಪಾಧ್ಯಕ್ಷರಾಗಿ ಚಂದಯ್ಯ ದೇವಾಡಿಗ, ಜತೆ ಕಾರ್ಯದರ್ಶಿಯಾಗಿ ರಾಘವ ದೇವಾಡಿಗ, ಸ್ವಸಹಾಯ ಸಂಘದ ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ ಹಾಗೂ ಇತರ ಸದಸ್ಯರನ್ನು ಆಯ್ಕೆ ಮಾಡಲಾಯಿತು.ವಿಠಲ ದೇವಾಡಿಗ ಸ್ವಾಗತಿಸಿ, ವಿಶ್ವನಾಥ್ ದೇವಾಡಿಗ ನಿರೂಪಿಸಿದರು, ಹರೀಶ್ ದೇವಾಡಿಗ ವಂದಿಸಿದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya
error: Content is protected !!