25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!