April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya
error: Content is protected !!