22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!