September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಮೇ 21: ವಿದ್ಯುತ್ ನಿಲುಗಡೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!