22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ಹೆಮ್ಮೆಯ ಪೂರ್ವ ವಲಯ ಉಪಾಧ್ಯಕ್ಷರು, ಹಾಗೂ ಮಡಂತ್ಯಾರು ಡ್ರೀಮ್ಸ್ ಡೆಕೋರೇಟರ್ಸ್ ಹಾಗೂ ಮೈಸ್ ಕಂಪ್ಯೂಟರಿನ ಮಾಲಕರಾದ ಜೇಸಿ ಜಯೇಶ್ ಬರೆಟ್ಟೊ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜು.28 ರಂದು ಗೌರವಿಸಲಾಯಿತು.

2011 ರಲ್ಲಿ ಜೆಸಿಐ ಮಡಂತ್ಯಾರು ಮೂಲಕ ಜೇಸಿ ಆಂದೋಲನಕ್ಕೆ ಸದಸ್ಯರಾಗಿ ಸೇರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ 2016 ರಲ್ಲಿ ಜೆಸಿಐ ಮಡಂತ್ಯಾರಿನ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ 24 ವರ್ಷಗಳ ಸುಧೀರ್ಘ ಅನುಭವ ಹೊಂದಿದ ಇವರು ಸಾಧನಾ ಶ್ರೀ ಪ್ರಶಸ್ತಿ ಪಡೆಯುವಲ್ಲಿ ಅರ್ಹ ವ್ಯಕ್ತಿಯೇ ಸರಿ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!