July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya
error: Content is protected !!