25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ತಂಡದ ಸದಸ್ಯರಾದ ಅದ್ವಿತ್ ಮತ್ತು ಕೃತಿ ಅವರ ಪೋಷಕರಾದ ವೇದಾವತಿ ಅವರ ತಾಯಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಪೆಟ್ಟಾಗಿದ್ದು ಈಗಾಗಲೇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ ಚೇತರಿಸಿಕೊಂಡಿದ್ದಾರೆ.

ಆದರೆ ಅವರಿಗೆ ಇನ್ನೊಬ್ಬರ ಸಹಾಯವಿಲ್ಲದೆ ನಡೆದಾಡಲು ಕಷ್ಟವಾಗುತ್ತಿದ್ದು ಇದೀಗ ಅವರಿಗೆ ನಡೆದಾಡಲು ವಾಕರ್ ನ ಅವಶ್ಯಕತೆ ಇದ್ದು ಅದನ್ನು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಆರೋಗ್ಯ ಸೇವಾ ಎಂಟನೇ ಯೋಜನೆಯ ಮೂಲಕ ಜು.28ರಂದು ಅವರಿಗೆ ಹಸ್ತಾಂತರ ಮಾಡಲಾಯಿತು.

ಈ ಸೇವಾ ಯೋಜನೆಗೆ ಯುವ ಉದ್ಯಮಿಗಳಾದ ಎಗ್ರೀನ್ ಬಯೋಟೆಕ್ ಸಂಸ್ಥಾಪಕರು ಅಶ್ವಥ್ ಹೆಗ್ಡೆ ಬಳಂಜ ಇವರು ಕೂಡ ಕೈ ಜೋಡಿಸಿದ್ದು, ವೇದಾವತಿ ಅವರ ಮನೆಗೆ 30 ಕೆಜಿ ಅಕ್ಕಿ ಮತ್ತು ಎಲ್ಲಾ ದಿನಸಿ ಸಾಮಗ್ರಿಗಳನ್ನೂ ನೀಡಲು ಸಹಾಯಹಸ್ತ ನೀಡಿದರು. ಈ ಸಂದರ್ಭದಲ್ಲಿ ಮಂಡಳಿಯ ಸಂಚಾಲಕರು ಹರೀಶ್ ವೈ ಚಂದ್ರಮ, ಅದ್ಯಕ್ಷರು ಜ್ಯೋತಿ ಪೂಜಾರಿ, ಗುರುಗಳು ಮಾನ್ಯ ಹಾಗೂ ತಂಡದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ತಂಡದ ಪೋಷಕರು ಹಾಜರಿದ್ದರು.

Related posts

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!