26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!