24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya
error: Content is protected !!