September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya
error: Content is protected !!