23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!