22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ ಮತ್ತು ವನಿತಾ ಶೆಟ್ಟಿ, ಅಧ್ಯಕ್ಷರು ಉಜಿರೆ ವಲಯ ಬಂಟರ ಸಂಘ ಇವರು ದೀಪ ಬೆಳಗಿಸಿ ಮತ್ತು ಚೆಣ್ಣೆ ಮಣೆ ಆಡಿ ನೆರವೇರಿಸಿದರು.

ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಆಟಿದ ದಿನದ ಮಹತ್ವದ ಬಗ್ಗೆ ತಿಳಿಸಿದರು.

ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಮತ್ತು ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ವಿವಿಧ ಭಕ್ತಿ ಸುಗಿಪು ಹಾಡುಗಳು ಮತ್ತು ಸಂದಿ ಪಾಡ್ದನಗಳನ್ನು ಹಾಡಿದರು. ಬಳಿಕ ತುಳುನಾಡ ಸಿರಿ ಎಂಬ ಯಕ್ಷಗಾನ ತಾಳಮದ್ದಲೆ ಯನ್ನು ಗ್ರಾಮದ ಬಂಟ ಕಲಾವಿದರು ನೆರವೇರಿಸಿದರು. ಗ್ರಾಮ ಸಮಿತಿಯ ಸದಸ್ಯರು ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳನ್ನು ತಂದು ಶಿವರಾಜ್ ರೈ ಸೋಮಂತಡ್ಕ ಇವರ ಮನೆಯಲ್ಲಿ ಭೋಜನ ಕೂಟ ವನ್ನು ಏರ್ಪಡಿಸಿದರು. ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಸಹಕರಿಸಿದರು.

ಜೊತೆ ಕಾರ್ಯದರ್ಶಿ ನವೀನ್ ಶೆಟ್ಟಿ ಇವರು ನಿರೂಪಿಸಿ,ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!