September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಇವರು ನೇಮಕ ಮಾಡಿದ್ದಾರೆ.

ಅತ್ಯಂತ ಉತ್ಸಾಹಿ ಸಂಘಟಕರಾದ ಫಾ. ಆದರ್ಶ್ ಅವರು ಕೆ ಎಸ್ ಎಂ ಸಿ ಎ ನಿರ್ದೇಶಕರಾಗಿ ನೇಮಕವಾಗಿರುವುದರಿಂದ ಸಂಘಟನೆಯ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಹಾಗೂ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು ಗುರುಗಳ ನೇಮಕಾತಿಯನ್ನು ಸ್ವಾಗತ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ನೂತನ ನಿರ್ದೇಶಕರಾಗಿರುವ ಫಾ. ಆದರ್ಶ್ ಅವರು ಸದ್ಯ ಗುತ್ತಿಗಾರು, ನೆಟ್ಟಣ ಧರ್ಮ ಕೇಂದ್ರಗಳ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!