25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ ನದಿ ಸಂಪರ್ಕದ ತೋಡಿನ ನೀರು ಮತ್ತು ಕೆಸರು ಮಣ್ಣು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು ಇನ್ನಿತರ ಬೆಳೆಗಳ ಸ್ಥಿತಿಯ ಬಗ್ಗೆ ಆ ಭಾಗದ ಕೃಷಿಕರು ಆತಂಕ ದಲ್ಲಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ತೋಟದ ಮೇಲ್ಬಾಗದಲ್ಲಿ ಸಂಪೂರ್ಣ ಕೆಸರು ಮಣ್ಣು ನಿಂತು ಕೃಷಿಕರಿಗೆ ಭಯ ಭೀತಿ ಉಂಟಾಗಿದೆ.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ಮಾಹಿತಿ ಪಡೆದುಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


2019 ನೇ ಇಸವಿಯಲ್ಲಿ ಈ ಭಾಗದ ಕೃಷಿಕರಿಗೆ ಇದೇ ರೀತಿಯ ವಾತಾವರಣ ನಿರ್ಮಾಣವಾಗಿತ್ತು, ಪರಿಹಾರ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಪರಿಹಾರ ನೀಡಬೇಕಾಗಿ ಆತಂಕದಲ್ಲಿರುವ ಕೃಷಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya
error: Content is protected !!