July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ ನದಿ ಸಂಪರ್ಕದ ತೋಡಿನ ನೀರು ಮತ್ತು ಕೆಸರು ಮಣ್ಣು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು ಇನ್ನಿತರ ಬೆಳೆಗಳ ಸ್ಥಿತಿಯ ಬಗ್ಗೆ ಆ ಭಾಗದ ಕೃಷಿಕರು ಆತಂಕ ದಲ್ಲಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ತೋಟದ ಮೇಲ್ಬಾಗದಲ್ಲಿ ಸಂಪೂರ್ಣ ಕೆಸರು ಮಣ್ಣು ನಿಂತು ಕೃಷಿಕರಿಗೆ ಭಯ ಭೀತಿ ಉಂಟಾಗಿದೆ.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ಮಾಹಿತಿ ಪಡೆದುಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


2019 ನೇ ಇಸವಿಯಲ್ಲಿ ಈ ಭಾಗದ ಕೃಷಿಕರಿಗೆ ಇದೇ ರೀತಿಯ ವಾತಾವರಣ ನಿರ್ಮಾಣವಾಗಿತ್ತು, ಪರಿಹಾರ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಪರಿಹಾರ ನೀಡಬೇಕಾಗಿ ಆತಂಕದಲ್ಲಿರುವ ಕೃಷಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
error: Content is protected !!