July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya
error: Content is protected !!