23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
error: Content is protected !!