30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ಆದರ್ಶ್ ಜೋಸೆಫ್ ಪುತಿಯೇಡತ್ ಇವರನ್ನು ಬೆಳ್ತಂಗಡಿ ಧರ್ಮಧ್ಯಕ್ಷ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಇವರು ನೇಮಕ ಮಾಡಿದ್ದಾರೆ.

ಅತ್ಯಂತ ಉತ್ಸಾಹಿ ಸಂಘಟಕರಾದ ಫಾ. ಆದರ್ಶ್ ಅವರು ಕೆ ಎಸ್ ಎಂ ಸಿ ಎ ನಿರ್ದೇಶಕರಾಗಿ ನೇಮಕವಾಗಿರುವುದರಿಂದ ಸಂಘಟನೆಯ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಹಾಗೂ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅವರು ಗುರುಗಳ ನೇಮಕಾತಿಯನ್ನು ಸ್ವಾಗತ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘಟನೆ ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ನೂತನ ನಿರ್ದೇಶಕರಾಗಿರುವ ಫಾ. ಆದರ್ಶ್ ಅವರು ಸದ್ಯ ಗುತ್ತಿಗಾರು, ನೆಟ್ಟಣ ಧರ್ಮ ಕೇಂದ್ರಗಳ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
error: Content is protected !!