24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!