22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!