23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!